ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm