ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm