ಬ್ರೇಕಿಂಗ್ ನ್ಯೂಸ್
08-03-21 05:12 pm Headline Karnataka News Network ಕರ್ನಾಟಕ
ಉಡುಪಿ, ಮಾ.8: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿ, ಪತ್ರಕರ್ತನ ಸೋಗಿನಲ್ಲಿದ್ದ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವ್ಯಾಪ್ತಿಯ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಚಂದ್ರ ಕೆ.ಹೆಮ್ಮಾಡಿ ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ, ಅಲ್ಲಿನ ಬಾಲಕನೊಬ್ಬನಿಗೆ ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಬೈಂದೂರು ಠಾಣೆಗೆ ನೀಡಿದ ದೂರಿನಂತೆ 2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಬಳಿಕ ಆರೋಪಿ ವಿರುದ್ಧ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸರದಿಯಂತೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಮೊದಲ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಗೆ ಮೊದಲ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ದಂಡದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
A Man who was reportedly calling himself an Journalsit in Udupi has been ordered bh the court for 10 years imprisonment for sexually harrsing boys by taking him to an isolated area.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm