ಬ್ರೇಕಿಂಗ್ ನ್ಯೂಸ್
08-03-21 05:12 pm Headline Karnataka News Network ಕರ್ನಾಟಕ
ಉಡುಪಿ, ಮಾ.8: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿ, ಪತ್ರಕರ್ತನ ಸೋಗಿನಲ್ಲಿದ್ದ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವ್ಯಾಪ್ತಿಯ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಚಂದ್ರ ಕೆ.ಹೆಮ್ಮಾಡಿ ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ, ಅಲ್ಲಿನ ಬಾಲಕನೊಬ್ಬನಿಗೆ ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಬೈಂದೂರು ಠಾಣೆಗೆ ನೀಡಿದ ದೂರಿನಂತೆ 2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಬಳಿಕ ಆರೋಪಿ ವಿರುದ್ಧ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸರದಿಯಂತೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಮೊದಲ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಗೆ ಮೊದಲ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ದಂಡದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
A Man who was reportedly calling himself an Journalsit in Udupi has been ordered bh the court for 10 years imprisonment for sexually harrsing boys by taking him to an isolated area.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm