ಬ್ರೇಕಿಂಗ್ ನ್ಯೂಸ್
09-03-21 09:33 pm Headline Karnataka News Network ಕರ್ನಾಟಕ
ಕೊಡಗು, ಮಾರ್ಚ್ 9: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ಹಂತಕ ಹುಲಿಯ ಹಾವಳಿ ಮಿತಿ ಮೀರಿದ್ದು, ಬೆಳಂಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ತಾತನ ಜೊತೆ ಹೊಗಿದ್ದ ಮಗು ಚಿರತೆ ಪಾಲಾದ ಘಟನೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಸದ್ಯ ಈ ವ್ಯಾಘ್ರನ ಉಪಟಳವನ್ನ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವುದರ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.
ಗ್ರಾಮದ ಚಕ್ಕೇರ ಸನ್ನಿ ಸುಬ್ಬಯ್ಯ ಎಂಬುವವರ ತೋಟದಲ್ಲಿ ಕೆಲಸಕ್ಕಿದ್ದ ಕಾರ್ಮಿಕರ ಕುಟುಂಬ ಹುಲಿ ಭಯದಿಂದ ಕಳೆದೊಂದು ವಾರದಿಂದ ತೋಟದತ್ತ ಮುಖ ಮಾಡಿರಲಿಲ್ಲ. ಆದರೆ ಇಂದು ಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ಮೋಟಾರ್ ಆನ್ ಮಾಡುವಂತೆ 8 ವರ್ಷದ ಬಾಲಕ ರಂಗ ಸ್ವಾಮಿಯನ್ನ ಕಳುಹಿಸಿದ್ದಾರೆ. ಆತ ತೆರಳಿ ಎಷ್ಟು ಹೊತ್ತಾದರೂ ಮರಳಿಲ್ಲ. ಹಾಗಾಗಿ ಆತನನ್ನ ಹುಡುಕುತ್ತಾ ತಾತ ಕೆಂಚ ಅಲ್ಲಿಗೆ ತೆರಳಿದ್ದಾರೆ. ಆದರೆ, ತಾತ ಕೂಡ ಮರಳುವುದಿಲ್ಲ.

ಇದರಿಂದ ಆತಂಕಗೊಂಡ ಕುಟುಂಬಸ್ಥರು ತಾತ ಮತ್ತು ಮಗುವನ್ನು ಹುಡುಕುತ್ತಾ ತೋಟಕ್ಕೆ ತೆರಳಿದ್ದಾರೆ. ಆದರೆ ಅವರಿಗೆ ತೋಟದಲ್ಲಿ ಕಂಡಿದ್ದು, ಮಗು ರಂಗಸ್ವಾಮಿ ಮೆದುಳು ಹೊರಬಂದು ಅಪ್ಪಚ್ಚಿಯಾಗಿ ಹೆಣವಾಗಿ ಹೋಗಿರುವುದು ಮತ್ತು ತಾತ ಕೆಂಚ ತೀವ್ರವಾಗಿ ಗಾಯಗೊಂಡು ನರಳುತ್ತಾ ಬಿದ್ದಿದ್ದ ದೃಶ್ಯ. ಕಳೆದ ರಾತ್ರಿಯಷ್ಟೇ ಇದೆ ಗ್ರಾಮದಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಈಗ ಈ ವ್ಯಾಘ್ರಕ್ಕೆ ಸುಲಭವಾಗಿ ಸಿಕ್ಕಿದ್ದು ಇದೇ ಬಾಲಕ ರಂಗಸ್ವಾಮಿ ಮತ್ತು ತಾತ ಕೆಂಚ.
ಯಾವಾಗ ಈ ಘಟನೆ ನಡೆಯಿತೋ ಇಡೀ ಬೆಳ್ಳೂರು ಗ್ರಾಮ ರೊಚ್ಚಿಗೆದ್ದಿತ್ತು. 15 ದಿನಗಳ ಹಿಂದಷ್ಟೇ ಓರ್ವ ಬಾಲಕ ಹಾಗೂ ಮತ್ತೋರ್ವ ಮಹಿಳೆಯನ್ನ ಇದೇ ಹುಲಿ ಕೊಂದು ಹೋಗಿತ್ತು. ಜೊತೆಗೆ 13 ಹಸುಗಳನ್ನೂ ಬಲಿ ಪಡೆದಿತ್ತು. ಈ ಅರಣ್ಯ ಇಲಾಖೆ ಮಾತ್ರ ಹುಲಿ ಸೆರೆ ಹಿಡಿಯದೆ ಕಾಲ ಹರಣ ಮಾಡ್ತಾ ಇದೆ ಎಂದು ಆರೋಪಿಸಿದ ಗ್ರಾಮಸ್ಥರು ಗೋಣಿಕೊಪ್ಪ-ಕೇರಳ ಮುಖ್ಯ ರಸ್ತೆಯನ್ನ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಹುಲಿಗೆ ನೀವೇ ಗುಂಡಿಕ್ಕಿ ಇಲ್ಲಾ, ನಾವು ಗ್ರಾಮಸ್ಥರೇ ಗುಂಡಿಕ್ಕುತ್ತೇವೆ ಎಂದು ಆಗ್ರಹಿಸಿದ್ದು, ಗ್ರಾಮಸ್ಥರ ಆಗ್ರಹಕ್ಕೆ ಮಣಿದಿರುವ ಅರಣ್ಯ ಇಲಾಖೆ ಕೊನೆಗೂ ಹುಲಿಯನ್ನು ಕೊಲ್ಲುತ್ತೇವೆ ಎಂದು ಕಾರ್ಯಾಚರಣೆಗೆ ಇಳಿದಿದೆ.
In a tragic incident an 8 year old youth was killed after a tiger attacked him in Madikeri.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm