ಬ್ರೇಕಿಂಗ್ ನ್ಯೂಸ್
09-03-21 09:33 pm Headline Karnataka News Network ಕರ್ನಾಟಕ
ಕೊಡಗು, ಮಾರ್ಚ್ 9: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ಹಂತಕ ಹುಲಿಯ ಹಾವಳಿ ಮಿತಿ ಮೀರಿದ್ದು, ಬೆಳಂಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ತಾತನ ಜೊತೆ ಹೊಗಿದ್ದ ಮಗು ಚಿರತೆ ಪಾಲಾದ ಘಟನೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಸದ್ಯ ಈ ವ್ಯಾಘ್ರನ ಉಪಟಳವನ್ನ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವುದರ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.
ಗ್ರಾಮದ ಚಕ್ಕೇರ ಸನ್ನಿ ಸುಬ್ಬಯ್ಯ ಎಂಬುವವರ ತೋಟದಲ್ಲಿ ಕೆಲಸಕ್ಕಿದ್ದ ಕಾರ್ಮಿಕರ ಕುಟುಂಬ ಹುಲಿ ಭಯದಿಂದ ಕಳೆದೊಂದು ವಾರದಿಂದ ತೋಟದತ್ತ ಮುಖ ಮಾಡಿರಲಿಲ್ಲ. ಆದರೆ ಇಂದು ಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ಮೋಟಾರ್ ಆನ್ ಮಾಡುವಂತೆ 8 ವರ್ಷದ ಬಾಲಕ ರಂಗ ಸ್ವಾಮಿಯನ್ನ ಕಳುಹಿಸಿದ್ದಾರೆ. ಆತ ತೆರಳಿ ಎಷ್ಟು ಹೊತ್ತಾದರೂ ಮರಳಿಲ್ಲ. ಹಾಗಾಗಿ ಆತನನ್ನ ಹುಡುಕುತ್ತಾ ತಾತ ಕೆಂಚ ಅಲ್ಲಿಗೆ ತೆರಳಿದ್ದಾರೆ. ಆದರೆ, ತಾತ ಕೂಡ ಮರಳುವುದಿಲ್ಲ.

ಇದರಿಂದ ಆತಂಕಗೊಂಡ ಕುಟುಂಬಸ್ಥರು ತಾತ ಮತ್ತು ಮಗುವನ್ನು ಹುಡುಕುತ್ತಾ ತೋಟಕ್ಕೆ ತೆರಳಿದ್ದಾರೆ. ಆದರೆ ಅವರಿಗೆ ತೋಟದಲ್ಲಿ ಕಂಡಿದ್ದು, ಮಗು ರಂಗಸ್ವಾಮಿ ಮೆದುಳು ಹೊರಬಂದು ಅಪ್ಪಚ್ಚಿಯಾಗಿ ಹೆಣವಾಗಿ ಹೋಗಿರುವುದು ಮತ್ತು ತಾತ ಕೆಂಚ ತೀವ್ರವಾಗಿ ಗಾಯಗೊಂಡು ನರಳುತ್ತಾ ಬಿದ್ದಿದ್ದ ದೃಶ್ಯ. ಕಳೆದ ರಾತ್ರಿಯಷ್ಟೇ ಇದೆ ಗ್ರಾಮದಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಈಗ ಈ ವ್ಯಾಘ್ರಕ್ಕೆ ಸುಲಭವಾಗಿ ಸಿಕ್ಕಿದ್ದು ಇದೇ ಬಾಲಕ ರಂಗಸ್ವಾಮಿ ಮತ್ತು ತಾತ ಕೆಂಚ.
ಯಾವಾಗ ಈ ಘಟನೆ ನಡೆಯಿತೋ ಇಡೀ ಬೆಳ್ಳೂರು ಗ್ರಾಮ ರೊಚ್ಚಿಗೆದ್ದಿತ್ತು. 15 ದಿನಗಳ ಹಿಂದಷ್ಟೇ ಓರ್ವ ಬಾಲಕ ಹಾಗೂ ಮತ್ತೋರ್ವ ಮಹಿಳೆಯನ್ನ ಇದೇ ಹುಲಿ ಕೊಂದು ಹೋಗಿತ್ತು. ಜೊತೆಗೆ 13 ಹಸುಗಳನ್ನೂ ಬಲಿ ಪಡೆದಿತ್ತು. ಈ ಅರಣ್ಯ ಇಲಾಖೆ ಮಾತ್ರ ಹುಲಿ ಸೆರೆ ಹಿಡಿಯದೆ ಕಾಲ ಹರಣ ಮಾಡ್ತಾ ಇದೆ ಎಂದು ಆರೋಪಿಸಿದ ಗ್ರಾಮಸ್ಥರು ಗೋಣಿಕೊಪ್ಪ-ಕೇರಳ ಮುಖ್ಯ ರಸ್ತೆಯನ್ನ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಹುಲಿಗೆ ನೀವೇ ಗುಂಡಿಕ್ಕಿ ಇಲ್ಲಾ, ನಾವು ಗ್ರಾಮಸ್ಥರೇ ಗುಂಡಿಕ್ಕುತ್ತೇವೆ ಎಂದು ಆಗ್ರಹಿಸಿದ್ದು, ಗ್ರಾಮಸ್ಥರ ಆಗ್ರಹಕ್ಕೆ ಮಣಿದಿರುವ ಅರಣ್ಯ ಇಲಾಖೆ ಕೊನೆಗೂ ಹುಲಿಯನ್ನು ಕೊಲ್ಲುತ್ತೇವೆ ಎಂದು ಕಾರ್ಯಾಚರಣೆಗೆ ಇಳಿದಿದೆ.
In a tragic incident an 8 year old youth was killed after a tiger attacked him in Madikeri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm