ಬ್ರೇಕಿಂಗ್ ನ್ಯೂಸ್
19-08-20 09:22 pm Headline Karnataka News Network ಕರ್ನಾಟಕ
ಶಿವಮೊಗ್ಗ , ಆಗಸ್ಟ್ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".

ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.
ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.

ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm