ಬ್ರೇಕಿಂಗ್ ನ್ಯೂಸ್
19-08-20 09:22 pm Headline Karnataka News Network ಕರ್ನಾಟಕ
ಶಿವಮೊಗ್ಗ , ಆಗಸ್ಟ್ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".

ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.
ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.

ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm