ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.
ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm