ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm