ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm