ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm