ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm