ಬ್ರೇಕಿಂಗ್ ನ್ಯೂಸ್
13-03-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.13: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಹಾಲ್ ಅಥವಾ ಯಾವುದೇ ರೀತಿಯ ಒಳಾಂಗಣಗಳಲ್ಲಿ ನಡೆಯುವ ಮದುವೆ ಇನ್ನಿತರ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ತೆರೆದ ಮೈದಾನಗಳಲ್ಲಿ ಮದುವೆ ನಡೆಯುವುದಿದ್ದರೆ 500 ಜನ ಸೇರಲು ಅವಕಾಶ ನೀಡಲಾಗಿದೆ. ಹುಟ್ಟುಹಬ್ಬ, ಶವ ಸಂಸ್ಕಾರ, ಅಂತ್ಯಕ್ರಿಯೆ ಅಥವಾ ಸಣ್ಣಮಟ್ಟಿನ ಕಾರ್ಯಕ್ರಮಗಳಿಗೆ ಒಳಾಂಗಣದಲ್ಲಿ ಕೇವಲ 50 ಜನ ಮಾತ್ರ ಸೇರಲು ಅವಕಾಶ ಇದ್ದರೆ, ಹೊರಭಾಗದಲ್ಲಿ ಕಾರ್ಯಕ್ರಮ ನಡೆಯುವುದಿದ್ದರೆ 100 ಜನ ಸೇರಲು ಅವಕಾಶ ನೀಡುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ತೆರೆದ ಪ್ರದೇಶಗಳಲ್ಲಿ ನಡೆಯುವ ಯಾವುದೇ ರೀತಿಯ ಧಾರ್ಮಿಕ ಆಚರಣೆಗಳು ಅಥವಾ ರಾಜಕೀಯ ಸಭೆಗಳಿಗೆ 500 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಎಲ್ಲ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತ ಸರಕಾರದ ಮಾರ್ಗಸೂಚಿಯಂತೆ, 3.25 ಚದರ ಮೀಟರ್ ಸಾಮಾಜಿಕ ಅಂತರ ಕಾಪಾಡಬೇಕು ಎಂದು ರಾಜ್ಯದ ಆರೋಗ್ಯ ಇಲಾಖೆಯಿಂದ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಪ್ರಕರಣ ಹೆಚ್ಚುತ್ತಿರುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪೀಡಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಸ್ಥಳೀಯಾಡಳಿತಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸೂಚನೆ ನೀಡಲಾಗಿದೆ.

ಇದೇ ವೇಳೆ, ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ರಾತ್ರಿ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ರೆಸ್ಟೋರೆಂಟ್, ಹಾಲ್, ಹೊಟೇಲ್ ಗಳಲ್ಲಿ ನಡೆಯುವ ರಾತ್ರಿ ಪಾರ್ಟಿಗಳಿಗೆ ಸಂಪೂರ್ಣ ಕಡಿವಾಣ ಹಾಕಿ, ರಾಜ್ಯ ಸರಕಾರ ಆದೇಶ ಮಾಡಿದೆ.

ರಾಜ್ಯದಲ್ಲಿ ಗುರುವಾರ ಒಂದೇ ದಿನ 833 ಹೊಸ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 526 ಹೊಸ ಪ್ರಕರಣ ಬೆಂಗಳೂರು ಒಂದರಲ್ಲೇ ವರದಿಯಾಗಿದ್ದು ಒಟ್ಟು 8114 ಕೋವಿಡ್ ಪಾಸಿಟಿವ್ ಸೋಂಕಿತರು ರಾಜ್ಯದಲ್ಲಿರುವುದನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿದೆ. ಹೀಗಾಗಿ ಮತ್ತೆ ಕೊರೊನಾ ಅಲೆ ಹೆಚ್ಚುತ್ತಿರುವುದನ್ನು ಗಮನಿಸಿ, ರಾಜ್ಯದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿಯಂತ್ರಣ ಹೇರಲಾಗಿದೆ.
The Karnataka State government has now issued a new rule for gatherings at a wedding, birthday parties and market fairs in Karnataka. Check details
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm