ಬ್ರೇಕಿಂಗ್ ನ್ಯೂಸ್
13-03-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.13: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಹಾಲ್ ಅಥವಾ ಯಾವುದೇ ರೀತಿಯ ಒಳಾಂಗಣಗಳಲ್ಲಿ ನಡೆಯುವ ಮದುವೆ ಇನ್ನಿತರ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ತೆರೆದ ಮೈದಾನಗಳಲ್ಲಿ ಮದುವೆ ನಡೆಯುವುದಿದ್ದರೆ 500 ಜನ ಸೇರಲು ಅವಕಾಶ ನೀಡಲಾಗಿದೆ. ಹುಟ್ಟುಹಬ್ಬ, ಶವ ಸಂಸ್ಕಾರ, ಅಂತ್ಯಕ್ರಿಯೆ ಅಥವಾ ಸಣ್ಣಮಟ್ಟಿನ ಕಾರ್ಯಕ್ರಮಗಳಿಗೆ ಒಳಾಂಗಣದಲ್ಲಿ ಕೇವಲ 50 ಜನ ಮಾತ್ರ ಸೇರಲು ಅವಕಾಶ ಇದ್ದರೆ, ಹೊರಭಾಗದಲ್ಲಿ ಕಾರ್ಯಕ್ರಮ ನಡೆಯುವುದಿದ್ದರೆ 100 ಜನ ಸೇರಲು ಅವಕಾಶ ನೀಡುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ತೆರೆದ ಪ್ರದೇಶಗಳಲ್ಲಿ ನಡೆಯುವ ಯಾವುದೇ ರೀತಿಯ ಧಾರ್ಮಿಕ ಆಚರಣೆಗಳು ಅಥವಾ ರಾಜಕೀಯ ಸಭೆಗಳಿಗೆ 500 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಎಲ್ಲ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತ ಸರಕಾರದ ಮಾರ್ಗಸೂಚಿಯಂತೆ, 3.25 ಚದರ ಮೀಟರ್ ಸಾಮಾಜಿಕ ಅಂತರ ಕಾಪಾಡಬೇಕು ಎಂದು ರಾಜ್ಯದ ಆರೋಗ್ಯ ಇಲಾಖೆಯಿಂದ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಪ್ರಕರಣ ಹೆಚ್ಚುತ್ತಿರುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪೀಡಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಸ್ಥಳೀಯಾಡಳಿತಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸೂಚನೆ ನೀಡಲಾಗಿದೆ.

ಇದೇ ವೇಳೆ, ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ರಾತ್ರಿ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ರೆಸ್ಟೋರೆಂಟ್, ಹಾಲ್, ಹೊಟೇಲ್ ಗಳಲ್ಲಿ ನಡೆಯುವ ರಾತ್ರಿ ಪಾರ್ಟಿಗಳಿಗೆ ಸಂಪೂರ್ಣ ಕಡಿವಾಣ ಹಾಕಿ, ರಾಜ್ಯ ಸರಕಾರ ಆದೇಶ ಮಾಡಿದೆ.

ರಾಜ್ಯದಲ್ಲಿ ಗುರುವಾರ ಒಂದೇ ದಿನ 833 ಹೊಸ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 526 ಹೊಸ ಪ್ರಕರಣ ಬೆಂಗಳೂರು ಒಂದರಲ್ಲೇ ವರದಿಯಾಗಿದ್ದು ಒಟ್ಟು 8114 ಕೋವಿಡ್ ಪಾಸಿಟಿವ್ ಸೋಂಕಿತರು ರಾಜ್ಯದಲ್ಲಿರುವುದನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿದೆ. ಹೀಗಾಗಿ ಮತ್ತೆ ಕೊರೊನಾ ಅಲೆ ಹೆಚ್ಚುತ್ತಿರುವುದನ್ನು ಗಮನಿಸಿ, ರಾಜ್ಯದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿಯಂತ್ರಣ ಹೇರಲಾಗಿದೆ.
The Karnataka State government has now issued a new rule for gatherings at a wedding, birthday parties and market fairs in Karnataka. Check details
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm