ಬ್ರೇಕಿಂಗ್ ನ್ಯೂಸ್
13-03-21 10:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.13: ಸಿಡಿ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ತೊಳಲಾಟಕ್ಕೆ ಕಾರಣವಾಗಿರುವಾಗಲೇ ಸಂತ್ರಸ್ತೆ ಎನ್ನಲಾದ ಯುವತಿ ವಿಡಿಯೋ ಬಿಡುಗಡೆ ಮಾಡಿ, ಮತ್ತೆ ಸಂಚಲನ ಮೂಡಿಸಿದ್ದಾರೆ.
ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ. ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜಾಗಿದೆ. ಇದರಿಂದ ನನ್ನ ತಂದೆ, ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಸಿಡಿಯಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಸಂತ್ರಸ್ತ ಯುವತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು ತನ್ನ ಮುಖವನ್ನು ಬ್ಲರ್ ಮಾಡದೇ ಹಾಗೆಯೇ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಾರದೋ ಕೈಗೊಂಬೆ; ರಮೇಶ್
![]()
ಇತ್ತ, ಸಂತ್ರಸ್ತ ಯುವತಿಯ ವಿಡಿಯೋ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, ಯುವತಿ ಯಾರದೋ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ದೂರು ನೀಡಿದ ಅರ್ಧ ಗಂಟೆಯಲ್ಲೇ ಯುವತಿ ಹೇಳಿಕೆ ಕೊಟ್ಟಿದ್ದಾರೆ. 12 ದಿನ ಏನೂ ಹೇಳದೆ ದೂರು ನೀಡಿದ ಬಳಿಕ ಪ್ರತ್ಯಕ್ಷವಾಗಿದ್ದಾರೆ ಎಂದು ಹೇಳಿದರು.
ಹೆಣ್ಣು ಮಗಳಾಗಿಯೂ ಇಷ್ಟೊಂದು ಷಡ್ಯಂತ್ರ ಮಾಡ್ತಿದ್ದಾರೆ. ನಾನು ನಿರಪರಾಧಿ. ಎಷ್ಟು ಸಿಡಿ ಬೇಕಾದ್ರೂ ಅವರು ಬಿಡುಗಡೆ ಮಾಡಲಿ. ಕೆಲವರಿಗೆ ನನಗಿಂತ ಹೆಚ್ಚಿನ ವಿಷಯ ಗೊತ್ತಿದೆ. ಎಸ್ಐಟಿಯವರು ಸೂಕ್ತ ತನಿಖೆ ನಡೆಸಲಿ. ಕಾನೂನು ಪ್ರಕಾರ ಯುವತಿಗೆ ರಕ್ಷಣೆ ಕೊಡಲಿ. ಕೇಸ್ ತನಿಖೆ ಬಗ್ಗೆ ಗೃಹಸಚಿವರಿಂದ ಮಾಹಿತಿ ಪಡೆದಿದ್ದೇನೆ ಎಂದು ಗೃಹ ಸಚಿವರ ಭೇಟಿ ಬಳಿಕ ರಮೇಶ್ ಜಾರಕಿಹೊಳಿ ಹೇಳಿದರು.
‘ಸಂತ್ರಸ್ತೆಯ ವಿಡಿಯೋ ಹೇಳಿಕೆ ಗಮನಿಸಿಲ್ಲ’

ಸಂತ್ರಸ್ತೆ ಬಿಡುಗಡೆ ಮಾಡಿರುವ ವಿಡಿಯೋ ಗಮನಿಸಿಲ್ಲ ಎಂದು ಗೃಹಸಚಿವ ಬೊಮ್ಮಾಯಿ ಹೇಳಿದ್ದಾರೆ. ಸಂತ್ರಸ್ತೆ ಕುಟುಂಬಕ್ಕೆ ಜೀವ ಭಯವಿದೆ ಎಂಬುದು ಗಮನಕ್ಕೆ ಬಂದಿದೆ. ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಸಿಡಿ ವಿಷಯದಲ್ಲಿ ವೈಯಕ್ತಿಕ ಅಭಿಪ್ರಾಯ ಮುಖ್ಯವಾಗಲ್ಲ. ತನಿಖೆಗೆ ವಹಿಸಿರುವುದರಿಂದ ಸತ್ಯಾಂಶ ಹೊರಬೀಳುತ್ತೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯುವತಿಯ ರಕ್ಷಣೆಗೆ ಬದ್ಧ ; ನಾಯ್ಡು

ರಮೇಶ್ ಸಿಡಿಯಲ್ಲಿರುವ ಯುವತಿಯ ರಕ್ಷಣೆಗೆ ಬದ್ಧ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಯತ್ನ ಬೇಡ. ಸಂತ್ತ್ರಸ್ತೆ ಖಿನ್ನತೆಗೊಳಗಾಗಿ ಭಯಪಡುವುದು ಬೇಡ. ಯುವತಿಗೆ ರಕ್ಷಣೆ ನೀಡಲು ಪೊಲೀಸರಿಗೂ ಸೂಚನೆ ಕೊಡುತ್ತೇವೆ. ಡಿಜಿ & ಐಜಿಪಿ, ಪೊಲೀಸ್ ಆಯುಕ್ತರಿಗೂ ಸೂಚನೆ ನೀಡಲಾಗುವುದು ಎಂದು ಪ್ರಮೀಳಾ ನಾಯ್ಡು ಹೇಳಿದ್ದಾರೆ.
Ramesh Jarkiholi sex cd women in the Video alleges that minister was sexually exploiting her in the name of job. She also said she attempted for suicde thrice
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm