ಬ್ರೇಕಿಂಗ್ ನ್ಯೂಸ್
14-03-21 08:21 pm Headline Karnataka News Network ಕರ್ನಾಟಕ
ಹೊಸಕೋಟೆ, ಮಾ 14: ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್ಬುಕ್ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು, ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.

ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್ಗಾಗಿ ಹುಡುಕಾಡುತ್ತಿದ್ದಾರೆ.
ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.
ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.
Boyfriend whose a auto driver by profession is alleged of Killing his girlfriend for the sake of money in Tumkur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm