ಬ್ರೇಕಿಂಗ್ ನ್ಯೂಸ್
14-03-21 08:21 pm Headline Karnataka News Network ಕರ್ನಾಟಕ
ಹೊಸಕೋಟೆ, ಮಾ 14: ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್ಬುಕ್ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು, ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.

ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್ಗಾಗಿ ಹುಡುಕಾಡುತ್ತಿದ್ದಾರೆ.
ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.
ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.
Boyfriend whose a auto driver by profession is alleged of Killing his girlfriend for the sake of money in Tumkur.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm