ಬ್ರೇಕಿಂಗ್ ನ್ಯೂಸ್
14-03-21 08:21 pm Headline Karnataka News Network ಕರ್ನಾಟಕ
ಹೊಸಕೋಟೆ, ಮಾ 14: ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್ಬುಕ್ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು, ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.
ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್ಗಾಗಿ ಹುಡುಕಾಡುತ್ತಿದ್ದಾರೆ.
ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.
ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.
Boyfriend whose a auto driver by profession is alleged of Killing his girlfriend for the sake of money in Tumkur.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm