ಬ್ರೇಕಿಂಗ್ ನ್ಯೂಸ್
15-03-21 08:01 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಸುಳಿವು ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ , ಬೀದರ್, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ 3500 ವ್ಯಾಕ್ಸಿನೇಶನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ಪಡೆದರೆ ದಿನದಲ್ಲಿ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
![]()
ಪಾಸಿಟಿವ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುವುದು. ಅಪಾರ್ಟ್ಮೆಂಟ್ ಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ತಜ್ಞರು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ, ರಾಜಕೀಯ ಸಭೆ ಇನ್ನಿತರ ಯಾವುದೇ ರೀತಿಯ ಸಭೆ, ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಮಯ ಕಡ್ಡಾಯ ಪಾಲಿಸುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಮಂದಿಯ ಮೇಲೆ ನಿಗಾ ಇಡಲಾಗುವುದು. ಸಾರಿಗೆ ಬಸ್ ಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರಷ್ಟೇ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ಡೌನ್, ಕರ್ಫ್ಯೂ, ಬಂದ್ ಬೇಡ ಎಂದಿದ್ದರೆ, ಜನರೇ ಸ್ವಯಂಪ್ರೇರಿತವಾಗಿ ಮುಂಜಾಗ್ರತೆ ವಹಿಸಬೇಕು. ಲಾಕ್ಡೌನ್ ಪರಿಸ್ಥಿತಿ ಆಗದಂತೆ ಜನರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Covid rise in Karnataka , the CM has given a veiled warning to the citizens that unless people themselves start taking precautions the government may consider further stringent action.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm