ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am