ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm