ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm