ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm