ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm