ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm