ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.

ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.

ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm