ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.
ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.
ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 04:42 pm
Mangalore Correspondent
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm