ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.

ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.

ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm