ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.

ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.

ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm