ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.

ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.

ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am