ಬ್ರೇಕಿಂಗ್ ನ್ಯೂಸ್
17-03-21 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17; ಶಬ್ದಮಾಲಿನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯದ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ವಕ್ಫ್ ಬೋರ್ಡಿನಡಿ ನೋಂದಣಿಯಾಗಿರುವ ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ವಕ್ಫ್ ಬೋರ್ಡ್ ಆದೇಶ ಹೊರಡಿಸಿದೆ. ಆದರೆ, ಸುತ್ತೋಲೆಯಲ್ಲಿ ಅಝಾನ್ ಕೂಗುವುದಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ವಕ್ಫ್ ಬೋರ್ಡ್ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಫಿ ಸ ಅದಿ ಅವರು, ‘ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲ. ಸುತ್ತೋಲೆಯ ಕ್ರಮ ಸಂಖ್ಯೆ ಮೂರರಲ್ಲಿ ಸ್ಪಷ್ಟವಾಗಿ ಅಝಾನ್ ಮತ್ತು ಇತರ ಯಾವ ವಿಚಾರಗಳಿಗೆ ಧ್ವನಿವರ್ಧಕ ಬಳಸಬಹುದೆಂದು ಸ್ಪಷ್ಟಪಡಿಸಲಾಗಿರುತ್ತದೆ. 10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ. ನಿರ್ಣಯದಲ್ಲಿ ಯಾವುದೇ ಲೋಪಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಸುತ್ತೋಲೆ ಹೊರಡಿಸಿದ್ದ ರಾಜ್ಯ ವಕ್ಫ್ ಬೋರ್ಡ್, ಶಬ್ದಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ತಡೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಅಲ್ಲದೇ ಶಬ್ದಮಾಲಿನ್ಯದಿಂದ ಆರೋಗ್ಯದ ಮೇಲಷ್ಟೇ ಅಲ್ಲ, ಜನಸಾಮಾನ್ಯರ ಮನಸ್ಸಿನ ಮೇಲೆಯೂ ಗಂಭೀರ ಪರಿಣಾಮ ಬೀಳಲಿದೆ. ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು.

ಹಗಲಿನಲ್ಲಿ ಬಳಸುವ ಧ್ವನಿವರ್ಧಕ ಶಬ್ದಕ್ಕೆ ಸಂಬಂಧಿಸಿ ಸುತ್ತಲಿನ ಗಾಳಿಯ ಗುಣಮಟ್ಟದ ಆಧಾರದಲ್ಲಿ ಇರಬೇಕು. ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು. ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್ಗಳನ್ನು ಬಳಸಬೇಕು. ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾ ಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ.
— Moulana Shafi Saadi (@shafi_saadi) March 16, 2021
ನಿರ್ಣಯದಲ್ಲಿ ಯಾವುದೇ ಲೋಪದೋಷಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm