ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am