ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm