ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm