ಬ್ರೇಕಿಂಗ್ ನ್ಯೂಸ್
18-03-21 01:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಸಿಡಿ ಗ್ಯಾಂಗ್ ಹಿಂದಿನ ಕತರ್ನಾಕ್ ಹಿಸ್ಟರಿ ಒಂದೊಂದಾಗಿಯೇ ಹೊರಬೀಳುತ್ತಿದೆ. ಎಸ್ಐಟಿ ತಂಡ ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಇದೇ ವೇಳೆ ಆರೋಪಿಗಳ ಮನೆಯಲ್ಲಿ ಭಾರೀ ಪ್ರಮಾಣದ ನಗದು, ಸ್ವರ್ಣಾಭರಣಗಳನ್ನು ಖರೀದಿಸಿದ ರಸೀದಿಗಳು, ಇತರ ಮಹತ್ವದ ಮಾಹಿತಿಗಳು ಪತ್ತೆಯಾಗಿವೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಜೊತೆ ಕಾಣಿಸಿಕೊಂಡಿದ್ದ ಯುವತಿ ಮನೆಯಲ್ಲಿ 9.2 ಲಕ್ಷ ರೂ. ನಗದು ಹಣ ಪತ್ತೆಯಾಗಿದ್ದರೆ, ಇದರ ರೂವಾರಿ ಎನ್ನಲಾದ ನರೇಶ್ ಗೌಡನ ಮನೆಯಲ್ಲಿ 19.5 ಲಕ್ಷ ಮೌ ಲ್ಯದ ಚಿನ್ನಾಭರಣ ಖರೀದಿಸಿರುವ ಬಗ್ಗೆ ರಸೀದಿಗಳು ಪತ್ತೆಯಾಗಿವೆ. ಯುವತಿಯ ಬಾಡಿಗೆ ಮನೆ ಆರ್ ಟಿ ನಗರದಲ್ಲಿದ್ದು, ನಿನ್ನೆ ರಾತ್ರಿ ಯುವತಿ ಮನೆಗೆ ಎಸ್ ಐಟಿ ಅಧಿಕಾರಿಗಳು ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ, ಲಕ್ಷಾಂತರ ರೂ. ನಗದು ಹಣ, ಖಾಲಿ ಬಿಯರ್ ಬಾಟಲಿಗಳು, ವೈನ್, ವಿಸ್ಕಿ ಬಾಟಲಿಗಳು, ಸಿಗರೇಟ್ ಪ್ಯಾಕೆಟ್ ಗಳು ಪತ್ತೆಯಾಗಿವೆ.
ಆರೋಪಿ ನರೇಶ್ ಗೌಡನ ಮನೆಯಲ್ಲಿ ಚಿನ್ನಾಭರಣ ಖರೀದಿಸಿರುವ ಬಗ್ಗೆ ರಸೀದಿ ಸಿಕ್ಕಿದೆ. ಆದರೆ, ಚಿನ್ನವನ್ನು ಎಲ್ಲಿಟ್ಟಿದ್ದಾನೆ ಅನ್ನೋದು ಗೊತ್ತಾಗಿಲ್ಲ. ಇದಲ್ಲದೆ, ಪೆನ್ ಡ್ರೈವ್ ನಲ್ಲಿ ಬಹಳಷ್ಟು ಮಾಹಿತಿಗಳು, ವಿಡಿಯೋಗಳು, ಇನ್ನಿತರ ಮಹತ್ವದ ಕಡತಗಳು ಪತ್ತೆಯಾಗಿವೆ. ರಮೇಶ್ ಜಾರಕಿಹೊಳಿ ಮತ್ತಿತರ ರಾಜಕಾರಣಿಗಳು ಎಲ್ಲಿ ತಂಗುತ್ತಾರೆ, ಎಲ್ಲಿ ಪ್ರವಾಸ ಹೋಗುತ್ತಾರೆ ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕಿದ್ದು ಅದರ ವಿವರಗಳು ದಾಳಿ ವೇಳೆ ಅಧಿಕಾರಿಗಳಿಗೆ ಸಿಕ್ಕಿವೆ.
ಇದೇ ವೇಳೆ, ಆರೋಪಿಗಳ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಲ್ಲಿ ಪ್ರಮುಖರು ಮಾಜಿ ಪತ್ರಕರ್ತರಾಗಿರುವುದರಿಂದ ಜೊತೆಗೆ ಗುರುತಿಸಿಕೊಂಡಿದ್ದ ಬೆಂಗಳೂರಿನ ಪತ್ರಕರ್ತರನ್ನೂ ಪೊಲೀಸರು ವಿಚಾರಣೆ ಮಾಡಿದ್ದಾರೆ.
ಆರೋಪಿಗಳ ವಿಚಾರಣೆ ವೇಳೆ ಒಬ್ಬರು ಶಾಸಕರು ಮತ್ತು ಉತ್ತರ ಕರ್ನಾಟಕ ಮೂಲದ ಮಾಜಿ ಸಚಿವರನ್ನು ಇದೇ ರೀತಿ ದಂಧೆಗೊಳಪಡಿಸಿ, ವಿಡಿಯೋ ಮುಂದಿಟ್ಟು ಹಣ ಪಡೆದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಿಡಿ ಗ್ಯಾಂಗ್ ಬೆಂಗಳೂರು ಕೇಂದ್ರೀಕರಿಸಿ, ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದರಾ ಎನ್ನೋದ್ರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಸಿಡಿ ಗ್ಯಾಂಗ್ ಹಿಂದಿದ್ಯಾ ಹನಿಟ್ರ್ಯಾಪ್ ದಾಳ ? ಮಾಜಿ ಸಚಿವರು, ಶಾಸಕರನ್ನು ಖೆಡ್ಡಾಕ್ಕೆ ಬೀಳಿಸಿರುವ ತಂಡ !!
Police have found lakhs of amount and Pen drive in the residence of the Gang that was behind the Honey Trap of Ramesh Jarkiholi.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 04:42 pm
Mangalore Correspondent
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm