ಬ್ರೇಕಿಂಗ್ ನ್ಯೂಸ್
18-03-21 01:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಸಿಡಿ ಗ್ಯಾಂಗ್ ಹಿಂದಿನ ಕತರ್ನಾಕ್ ಹಿಸ್ಟರಿ ಒಂದೊಂದಾಗಿಯೇ ಹೊರಬೀಳುತ್ತಿದೆ. ಎಸ್ಐಟಿ ತಂಡ ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಇದೇ ವೇಳೆ ಆರೋಪಿಗಳ ಮನೆಯಲ್ಲಿ ಭಾರೀ ಪ್ರಮಾಣದ ನಗದು, ಸ್ವರ್ಣಾಭರಣಗಳನ್ನು ಖರೀದಿಸಿದ ರಸೀದಿಗಳು, ಇತರ ಮಹತ್ವದ ಮಾಹಿತಿಗಳು ಪತ್ತೆಯಾಗಿವೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಜೊತೆ ಕಾಣಿಸಿಕೊಂಡಿದ್ದ ಯುವತಿ ಮನೆಯಲ್ಲಿ 9.2 ಲಕ್ಷ ರೂ. ನಗದು ಹಣ ಪತ್ತೆಯಾಗಿದ್ದರೆ, ಇದರ ರೂವಾರಿ ಎನ್ನಲಾದ ನರೇಶ್ ಗೌಡನ ಮನೆಯಲ್ಲಿ 19.5 ಲಕ್ಷ ಮೌ ಲ್ಯದ ಚಿನ್ನಾಭರಣ ಖರೀದಿಸಿರುವ ಬಗ್ಗೆ ರಸೀದಿಗಳು ಪತ್ತೆಯಾಗಿವೆ. ಯುವತಿಯ ಬಾಡಿಗೆ ಮನೆ ಆರ್ ಟಿ ನಗರದಲ್ಲಿದ್ದು, ನಿನ್ನೆ ರಾತ್ರಿ ಯುವತಿ ಮನೆಗೆ ಎಸ್ ಐಟಿ ಅಧಿಕಾರಿಗಳು ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ, ಲಕ್ಷಾಂತರ ರೂ. ನಗದು ಹಣ, ಖಾಲಿ ಬಿಯರ್ ಬಾಟಲಿಗಳು, ವೈನ್, ವಿಸ್ಕಿ ಬಾಟಲಿಗಳು, ಸಿಗರೇಟ್ ಪ್ಯಾಕೆಟ್ ಗಳು ಪತ್ತೆಯಾಗಿವೆ.

ಆರೋಪಿ ನರೇಶ್ ಗೌಡನ ಮನೆಯಲ್ಲಿ ಚಿನ್ನಾಭರಣ ಖರೀದಿಸಿರುವ ಬಗ್ಗೆ ರಸೀದಿ ಸಿಕ್ಕಿದೆ. ಆದರೆ, ಚಿನ್ನವನ್ನು ಎಲ್ಲಿಟ್ಟಿದ್ದಾನೆ ಅನ್ನೋದು ಗೊತ್ತಾಗಿಲ್ಲ. ಇದಲ್ಲದೆ, ಪೆನ್ ಡ್ರೈವ್ ನಲ್ಲಿ ಬಹಳಷ್ಟು ಮಾಹಿತಿಗಳು, ವಿಡಿಯೋಗಳು, ಇನ್ನಿತರ ಮಹತ್ವದ ಕಡತಗಳು ಪತ್ತೆಯಾಗಿವೆ. ರಮೇಶ್ ಜಾರಕಿಹೊಳಿ ಮತ್ತಿತರ ರಾಜಕಾರಣಿಗಳು ಎಲ್ಲಿ ತಂಗುತ್ತಾರೆ, ಎಲ್ಲಿ ಪ್ರವಾಸ ಹೋಗುತ್ತಾರೆ ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕಿದ್ದು ಅದರ ವಿವರಗಳು ದಾಳಿ ವೇಳೆ ಅಧಿಕಾರಿಗಳಿಗೆ ಸಿಕ್ಕಿವೆ.
ಇದೇ ವೇಳೆ, ಆರೋಪಿಗಳ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಲ್ಲಿ ಪ್ರಮುಖರು ಮಾಜಿ ಪತ್ರಕರ್ತರಾಗಿರುವುದರಿಂದ ಜೊತೆಗೆ ಗುರುತಿಸಿಕೊಂಡಿದ್ದ ಬೆಂಗಳೂರಿನ ಪತ್ರಕರ್ತರನ್ನೂ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಆರೋಪಿಗಳ ವಿಚಾರಣೆ ವೇಳೆ ಒಬ್ಬರು ಶಾಸಕರು ಮತ್ತು ಉತ್ತರ ಕರ್ನಾಟಕ ಮೂಲದ ಮಾಜಿ ಸಚಿವರನ್ನು ಇದೇ ರೀತಿ ದಂಧೆಗೊಳಪಡಿಸಿ, ವಿಡಿಯೋ ಮುಂದಿಟ್ಟು ಹಣ ಪಡೆದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಿಡಿ ಗ್ಯಾಂಗ್ ಬೆಂಗಳೂರು ಕೇಂದ್ರೀಕರಿಸಿ, ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದರಾ ಎನ್ನೋದ್ರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಸಿಡಿ ಗ್ಯಾಂಗ್ ಹಿಂದಿದ್ಯಾ ಹನಿಟ್ರ್ಯಾಪ್ ದಾಳ ? ಮಾಜಿ ಸಚಿವರು, ಶಾಸಕರನ್ನು ಖೆಡ್ಡಾಕ್ಕೆ ಬೀಳಿಸಿರುವ ತಂಡ !!
Police have found lakhs of amount and Pen drive in the residence of the Gang that was behind the Honey Trap of Ramesh Jarkiholi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm