ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm