ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm