ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am