ಬ್ರೇಕಿಂಗ್ ನ್ಯೂಸ್
19-03-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನೆ ಮುಂದೆ ಗನ್ ಮ್ಯಾನ್ ಮತ್ತು ವಾಹನ ಚಾಲಕ ಕಿತ್ತಾಡಿಕೊಂಡಿದ್ದು ಇಬ್ಬರು ಸಿಬ್ಬಂದಿಗಳ ಹೊಡೆದಾಟ ಬಿಡಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.

ಸಚಿವ ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್ಮ್ಯಾನ್ ತಿಮ್ಮಯ್ಯ ಪರಸ್ಪರ ಬೀದಿಯಲ್ಲಿ ಹೊಡೆದಾಡಿದವರು. ನಿನ್ನೆ ಡಾ.ಕೆ.ಸುಧಾಕರ್ ಅವರು ತನ್ನ ಮನೆ ಬಳಿ ಬರುವ ವೇಳೆಗೆ ಟೀ ಮಾರುತ್ತಿದ್ದ ಅಂಗವಿಕಲ ವ್ಯಕ್ತಿಯೋರ್ವರು ಅಡ್ಡ ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವರ ಗನ್ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ಗನ್ ಮ್ಯಾನ್ ಒಬ್ಬ ವಿಶೇಷಚೇತನ ವ್ಯಕ್ತಿಯ ಮೇಲೆ ಕೈಮಾಡಿದ್ದು ಅಲ್ಲಿದ್ದ ಎಲ್ಲರಿಗೂ ಬೇಸರ ತರಿಸಿದೆ.

ಘಟನೆ ಬಳಿಕ ಈ ವಿಚಾರದಲ್ಲಿ ಸ್ಥಳೀಯರು ತಿಮ್ಮಯ್ಯನನ್ನು ಪ್ರಶ್ನೆ ಮಾಡಿದ್ದರು. ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ಈ ಬಗ್ಗೆ ದೂರು ನೀಡಿರಬಹುದು ಎಂಬ ಅನುಮಾನದಲ್ಲಿ ಇಂದು ಬೆಳಗ್ಗೆ ಸೋಮಶೇಖರ್ ನನ್ನು ಪ್ರಶ್ನೆ ಮಾಡಿದ್ದಾನೆ. ‘ನಾನು ಟೀ ಮಾರಾಟಗಾರನಿಗೆ ಹಲ್ಲೆ ನಡೆಸಿದ್ದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದ್ದು ರಸ್ತೆಯಲ್ಲಿ ಇಬ್ಬರೂ ತಾವು ಸಚಿವರ ಸಿಬಂದಿ ಅನ್ನುವ ಪರಿವೇ ಇಲ್ಲದೆ ಹೊರಳಾಡಿದ್ದಾರೆ. ಸಿಬಂದಿಗಳಿಬ್ಬರು ಹೊಡೆದಾಟ, ಹೊರಳಾಡಿರುವ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಟೀಕೆ ಕೇಳಿಬಂದಿದೆ.

ಡಾ.ಕೆ.ಸುಧಾಕರ್ ಅವರ ಮನೆ ಸಮೀಪವೇ ರಮೇಶ್ ಜಾರಕಿಹೊಳಿ ಅವರ ಮನೆಯಿದೆ. ಸೀಡಿ ಪ್ರಕರಣದ ಬಳಿಕ ಮಾಧ್ಯಮ ಸಿಬ್ಬಂದಿಗಳು ಅವರ ಮನೆ ಮುಂದೆ ಇರುವುದು ವಾಡಿಕೆಯಾಗಿದ್ದರೆ, ಕೊರೊನಾ ಸೋಂಕಿನ ಆತಂಕದಿಂದಾಗಿ ಡಾ.ಕೆ.ಸುಧಾಕರ್ ಮನೆ ಬಳಿಯೂ ವಿವರ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಇರುತ್ತಾರೆ. ಇದೆಲ್ಲ ಗೊತ್ತಿದ್ದರೂ, ಹೀಗೆ ನಡುರಸ್ತೆಯಲ್ಲಿ ಸಚಿವರ ಸಿಬಂದಿ ಹೊಡೆದಾಡಿರುವುದು ಮಾಧ್ಯಮ ವಲಯದಲ್ಲಿ ನಗೆಪಾಟಲು ಮತ್ತು ಸಾರ್ವಜನಿಕರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Minister Sudhakar gunman and driver fight in front of his residence in Bangalore video goes viral on social media.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am