ಬ್ರೇಕಿಂಗ್ ನ್ಯೂಸ್
19-03-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನೆ ಮುಂದೆ ಗನ್ ಮ್ಯಾನ್ ಮತ್ತು ವಾಹನ ಚಾಲಕ ಕಿತ್ತಾಡಿಕೊಂಡಿದ್ದು ಇಬ್ಬರು ಸಿಬ್ಬಂದಿಗಳ ಹೊಡೆದಾಟ ಬಿಡಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.

ಸಚಿವ ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್ಮ್ಯಾನ್ ತಿಮ್ಮಯ್ಯ ಪರಸ್ಪರ ಬೀದಿಯಲ್ಲಿ ಹೊಡೆದಾಡಿದವರು. ನಿನ್ನೆ ಡಾ.ಕೆ.ಸುಧಾಕರ್ ಅವರು ತನ್ನ ಮನೆ ಬಳಿ ಬರುವ ವೇಳೆಗೆ ಟೀ ಮಾರುತ್ತಿದ್ದ ಅಂಗವಿಕಲ ವ್ಯಕ್ತಿಯೋರ್ವರು ಅಡ್ಡ ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವರ ಗನ್ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ಗನ್ ಮ್ಯಾನ್ ಒಬ್ಬ ವಿಶೇಷಚೇತನ ವ್ಯಕ್ತಿಯ ಮೇಲೆ ಕೈಮಾಡಿದ್ದು ಅಲ್ಲಿದ್ದ ಎಲ್ಲರಿಗೂ ಬೇಸರ ತರಿಸಿದೆ.

ಘಟನೆ ಬಳಿಕ ಈ ವಿಚಾರದಲ್ಲಿ ಸ್ಥಳೀಯರು ತಿಮ್ಮಯ್ಯನನ್ನು ಪ್ರಶ್ನೆ ಮಾಡಿದ್ದರು. ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ಈ ಬಗ್ಗೆ ದೂರು ನೀಡಿರಬಹುದು ಎಂಬ ಅನುಮಾನದಲ್ಲಿ ಇಂದು ಬೆಳಗ್ಗೆ ಸೋಮಶೇಖರ್ ನನ್ನು ಪ್ರಶ್ನೆ ಮಾಡಿದ್ದಾನೆ. ‘ನಾನು ಟೀ ಮಾರಾಟಗಾರನಿಗೆ ಹಲ್ಲೆ ನಡೆಸಿದ್ದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದ್ದು ರಸ್ತೆಯಲ್ಲಿ ಇಬ್ಬರೂ ತಾವು ಸಚಿವರ ಸಿಬಂದಿ ಅನ್ನುವ ಪರಿವೇ ಇಲ್ಲದೆ ಹೊರಳಾಡಿದ್ದಾರೆ. ಸಿಬಂದಿಗಳಿಬ್ಬರು ಹೊಡೆದಾಟ, ಹೊರಳಾಡಿರುವ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಟೀಕೆ ಕೇಳಿಬಂದಿದೆ.

ಡಾ.ಕೆ.ಸುಧಾಕರ್ ಅವರ ಮನೆ ಸಮೀಪವೇ ರಮೇಶ್ ಜಾರಕಿಹೊಳಿ ಅವರ ಮನೆಯಿದೆ. ಸೀಡಿ ಪ್ರಕರಣದ ಬಳಿಕ ಮಾಧ್ಯಮ ಸಿಬ್ಬಂದಿಗಳು ಅವರ ಮನೆ ಮುಂದೆ ಇರುವುದು ವಾಡಿಕೆಯಾಗಿದ್ದರೆ, ಕೊರೊನಾ ಸೋಂಕಿನ ಆತಂಕದಿಂದಾಗಿ ಡಾ.ಕೆ.ಸುಧಾಕರ್ ಮನೆ ಬಳಿಯೂ ವಿವರ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಇರುತ್ತಾರೆ. ಇದೆಲ್ಲ ಗೊತ್ತಿದ್ದರೂ, ಹೀಗೆ ನಡುರಸ್ತೆಯಲ್ಲಿ ಸಚಿವರ ಸಿಬಂದಿ ಹೊಡೆದಾಡಿರುವುದು ಮಾಧ್ಯಮ ವಲಯದಲ್ಲಿ ನಗೆಪಾಟಲು ಮತ್ತು ಸಾರ್ವಜನಿಕರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Minister Sudhakar gunman and driver fight in front of his residence in Bangalore video goes viral on social media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm