ಬ್ರೇಕಿಂಗ್ ನ್ಯೂಸ್
19-03-21 09:58 pm Headline Karnataka News Network ಕರ್ನಾಟಕ
ಉಡುಪಿ, ಮಾ.19 : ಕರಾವಳಿ ಭಾಗದಿಂದ ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದ್ದು ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ದಾರೆ. ಆದರೆ, ಯುವಕರಿಗೆ ಮೂಲ ಸೌಕರ್ಯಗಳಿಲ್ಲದೇ ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ನಡೆಯುತ್ತಿದ್ದು ರಾಜ್ಯದ ನಾನಾ ಭಾಗಗಳಿಂದ 3000 ಕ್ಕೂ ಅಧಿಕ ಮಂದಿ ಯುವಕರು ಬಂದಿದ್ದಾರೆ., ಆದರೆ ಹೀಗೆ ಬಂದ ಯುವಕರಿಗೆ ಜಿಲ್ಲಾಡಳಿತ ಸರಿಯಾದ ಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಕಳೆದೆರಡು ದಿನಗಳಿಂದಲೂ ಯುವಕರು ಪಾರ್ಕ್, ರಸ್ತೆ, ಪುಟ್ ಪಾತ್ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.
ದೇಶ ಸೇವೆಯ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು ಆಡಳಿತದಲ್ಲಿದ್ದರೂ, ಭವಿಷ್ಯದಲ್ಲಿ ದೇಶ ಸೇವೆಗೆ ಸಜ್ಜಾಗುತ್ತಿರುವ ಯುವಕರಿಗೆ ಕನಿಷ್ಠ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನಾ ನೇಮಕಾತಿಗೆ ಬರುವವರಿಗೆ ದೇಗುಲ ಸಭಾಂಗಣಗಳಲ್ಲಿ ವಸತಿ ಕಲ್ಪಿಸಲಾಗಿದೆ. ಮೈದಾನದಲ್ಲಿಯೂ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ಯುವಕರು ಒಂದು ದಿನ ಮೊದಲೇ ಬರುವುದರಿಂದ ಬೇಗನೆ ಸರತಿ ನಿಲ್ಲುವುದಕ್ಕಾಗಿ ರಸ್ತೆಯಲ್ಲಿ ಮಲಗುತ್ತಿದ್ದಾರೆ ಅನ್ನೋದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮರ್ಥನೆ.
Youths who had arrived for army selection camp Udupi we're found sleeping on the roads at Udupi. The pictures of this have gone viral on social media.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm