ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.
ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 05:54 pm
HK News Desk
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm