ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.

ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm