ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.

ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am