ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm