ಬ್ರೇಕಿಂಗ್ ನ್ಯೂಸ್
21-03-21 08:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 22: ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕೆಲವರ ವಿರೋಧಕ್ಕೆ ಕಾರಣವಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ವಿಚಾರವನ್ನು ಸ್ವತಃ ಬಿ.ಟಿ ಲಲಿತಾ ನಾಯಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಬಂಡಾಯ ಸಾಹಿತಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಬಿ.ಟಿ ಲಲಿತಾ ನಾಯಕ್ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಲಲಿತಾ ನಾಯಕ್, ತಮಗೆ ಸೇರಿದಂತೆ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿರುವ ಪತ್ರವನ್ನು ಉಲ್ಲೇಖಿಸಿ ಮಾತನಾಡಿದರು.
ಮೇ 1 ರಂದು ನನ್ನನ್ನು ಕೊಲೆ ಮಾಡುವುದಾಗಿ ಹೇಳಿ ನನಗೆ ಪತ್ರ ಬಂದಿತ್ತು. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬೆದರಿಕೆಗಳಿಗೆ ನಾನು ಹೆದರುವವಳಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವವರು ಎಲ್ಲಿದ್ದರೂ, ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೆ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಲಲಿತಾ ನಾಯಕ್ ಹೇಳಿದರು.
ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
A letter has reached Lalitha Naik a social activist stating to Kill her along with Minister CT Ravi and Public Tv Ranganath on May 1st, 2021.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm