ಬ್ರೇಕಿಂಗ್ ನ್ಯೂಸ್
21-03-21 08:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 22: ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕೆಲವರ ವಿರೋಧಕ್ಕೆ ಕಾರಣವಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ವಿಚಾರವನ್ನು ಸ್ವತಃ ಬಿ.ಟಿ ಲಲಿತಾ ನಾಯಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಬಂಡಾಯ ಸಾಹಿತಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಬಿ.ಟಿ ಲಲಿತಾ ನಾಯಕ್ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಲಲಿತಾ ನಾಯಕ್, ತಮಗೆ ಸೇರಿದಂತೆ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿರುವ ಪತ್ರವನ್ನು ಉಲ್ಲೇಖಿಸಿ ಮಾತನಾಡಿದರು.
ಮೇ 1 ರಂದು ನನ್ನನ್ನು ಕೊಲೆ ಮಾಡುವುದಾಗಿ ಹೇಳಿ ನನಗೆ ಪತ್ರ ಬಂದಿತ್ತು. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬೆದರಿಕೆಗಳಿಗೆ ನಾನು ಹೆದರುವವಳಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವವರು ಎಲ್ಲಿದ್ದರೂ, ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೆ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಲಲಿತಾ ನಾಯಕ್ ಹೇಳಿದರು.
ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
A letter has reached Lalitha Naik a social activist stating to Kill her along with Minister CT Ravi and Public Tv Ranganath on May 1st, 2021.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm