ಬ್ರೇಕಿಂಗ್ ನ್ಯೂಸ್
21-08-20 12:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್ ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಈ ಕ್ರಮ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ, ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ ಪರಿಹಾರವನ್ನೂ ಸಿಎಂ ಘೋಷಿಸಿದ್ಧಾರೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು. ಸರ್ಕಾರದ ಇತರ ಸೌಲಭ್ಯವನ್ನು ಶೀಘ್ರದಲ್ಲೇ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ವೈದ್ಯಾಧಿಕಾರಿ ನಾಗೇಂದ್ರ ನಿನ್ನೆ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಇವರ ಸಾವು ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಕುರಿತು ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಾತನಾಡಿದ್ದ ಸಚಿವ ಡಾ| ಕೆ. ಸುಧಾಕರ್, "ವೈದ್ಯಾಧಿಕಾರಿಯ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು. ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು" ಎಂದು ಭರವಸೆ ನೀಡಿದ್ದರು.
ಹಾಗೆಯೇ, ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ನೀಡುವುದಾಗಿ ಡಾ. ಸುಧಾಕರ್ ತಿಳಿಸಿದ್ದರು. ಆದರೆ, ವಿಶೇಷ ಸಂದರ್ಭವೆಂದು ಪರಿಗಣಿಸಿ ಪರಿಹಾರ ಹಣವನ್ನು 50 ಲಕ್ಷ ರೂಗೆ ಏರಿಸಲಾಗಿದೆ.
ಡಾ. ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಿ ಆಸ್ಪತ್ರೆ ವೈದ್ಯರು ಇಂದು ಬೆಳಗ್ಗೆ ಪ್ರತಿಭಟನೆ ಮುಂದುವರಿಸಿದರು. ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾರೊಬ್ಬರೂ ಕೆಲಸ ಮಾಡುವುದಿಲ್ಲ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ಯಾವುದೇ ಚಿಕಿತ್ಸೆ ನೀಡುವುದಿಲ್ಲ ಎಂದು ಆರೋಗ್ಯ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm